ಶಿಕ್ಷಕರ ದಿನಾಚರಣೆ


ಗುರುಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರಃ 
ಗುರುಸಾಕ್ಷಾತ್ ಪರಃ ಬ್ರಹ್ಮ ತಸ್ಮೈಶ್ರೀ ಗುರವೇ ನಮಃ...

     
 ಶಿಕ್ಷಕ ಒಬ್ಬ ಶಿಲ್ಪಿ ಇದ್ದ ಹಾಗೆ. ವಿದ್ಯಾರ್ಥಿ ಎಂಬ ಕಲ್ಲನ್ನು, ಕೆತ್ತಿ, ಅದರಿಂದ ಒಂದು ಹೊಸ ರೂಪವನ್ನು ಹೊರತಂದಾಗ ಮಾತ್ರ ಅವರ ವೃತ್ತಿ ಜೀವನದಲ್ಲಿ ಯಶಸ್ಸನ್ನು ಕಾಣಲು ಸಾಧ್ಯ. ಹೀಗೆ ದೇಶಕ್ಕೆ ಉತ್ತಮ ನಾಗರಿಕರನ್ನು ರೂಪಿಸಿಕೊಡುವಲ್ಲಿ ಗುರುವಿನ ಪಾತ್ರ ಮಹತ್ವವಾದದ್ದು. ವ್ಯಕ್ತಿತ್ವ ರೂಪಿಸಿಕೊಳ್ಳಲು ಕಾರಣರಾದ ಗುರುಗಳನ್ನು ನೆನೆಯುವ , ಶಿಕ್ಷಕರ ದಿನಾಚರಣೆ. ಪ್ರತಿವರ್ಷ ಸೆಪ್ಟೆಂಬರ್ 5ರಂದು ಶಿಕ್ಷಕರ ದಿನಾಚರಣೆಯ ರೂಪದಲ್ಲಿ ಆಚರಿಸಲಾಗುತ್ತಿದೆ. 


       ಭಾರತೀಯ ಶಿಕ್ಷಣ ವ್ಯವಸ್ಥೆಗೆ ಅಪ್ರತಿಮ ಯೋಗದಾದ ನೀಡಿದ  ಭಾರತದ ಮೊದಲ ಉಪ ರಾಷ್ಟ್ರಪತಿ ಹಾಗೂ ದ್ವಿತೀಯ ರಾಷ್ಟ್ರಪತಿ,  ಶಿಕ್ಷಕ, ದಾರ್ಶನಿಕ  ಡಾ. ಸರ್ವಪಲ್ಲಿ ರಾಧಾಕೃಷ್ಣನ್ರವರ ಜನ್ಮದಿನವನ್ನು  ಶಿಕ್ಷಕರ ದಿನಾಚರಣೆಯಾಗಿ ಆಚರಿಸುತ್ತೇವೆ. 

     ಈ ದಿನದಂದು ಮಕ್ಕಳಿಗೆ ಎಲ್ಲಿಲ್ಲದ  ಹಬ್ಬದ ಸಂಭ್ರಮ. ಡಾ. ರಾಧಾಕೃಷ್ಣನ್ ಅವರ ಭಾವಚಿತ್ರವಿರುವ ಚಿಕ್ಕ ಚಿತ್ರಗಳನ್ನು ಪುಸ್ತಕಗಳ ಮೇಲೆ ಅಂಟಿಸಿ ಸಂತಸಪಡುತ್ತಾರೆ. ಶಿಕ್ಷಕರ ಕುರಿತು  ಭಾಷಣ ಮಾಡಿ ಸಂತಸದಿಂದ ಬೀಗುತ್ತಾರೆ. ವಿದ್ಯಾರ್ಥಿಗಳು  ತಮ್ಮ ನೆಚ್ಚಿನ ಶಿಕ್ಷಕರಿಗಾಗಿ  ಶುಭಸಂದೇಶಗಳನ್ನೂ  ಗ್ರೀಟಿಂಗ್ ಕಾರ್ಡ್ಗಳನ್ನೂ  ತಮ್ಮ ಕೈಯಿಂದ ಮಾಡಿ ಕೊಡುತ್ತಾರೆ. .ಇಷ್ಟೇ ಅಲ್ಲದೆ  ವಿದ್ಯಾರ್ಥಿಗಳು  ತಮ್ಮ ನೆಚ್ಚಿನ ಶಿಕ್ಷಕರಿಗೆ ಉಡುಗೊರೆ ನೀಡಿ ಮೆಚ್ಚುಗೆ ಪಡೆಯುವ ಅವಕಾಶವನ್ನು ಕಳೆದುಕೊಳ್ಳಲು ಇಷ್ಟಪಡುವುದಿಲ್ಲ. ಇದರಿಂದ ಶಿಕ್ಷಕರಿಗೂ ತಾವು ವಿದ್ಯಾರ್ಥಿಗಳ ವಲಯದಲ್ಲಿ ಎಷ್ಟು ಜನಪ್ರಿಯರಾಗಿದ್ದೇವೆ ಎಂಬ ಹೆಮ್ಮೆ .  ಎಲ್ಲಾ  ಶಾಲೆಗಳು ತಮ್ಮ ಹಿರಿಯ ವರ್ಗದ  ವಿದ್ಯಾರ್ಥಿಗಳಿಗೆ ಈ ಒಂದು ದಿನದ ಮಟ್ಟಿಗೆ ಶಿಕ್ಷಕನಾಗುವ ಅವಕಾಶವನ್ನು ಮಾಡಿಕೊಡುತ್ತವೆ. ಮಕ್ಕಳು ಕೂಡ ಈ ಜವಾಬ್ದಾರಿಯನ್ನು ತುಂಬಾ ಖುಷಿಯಿಂದ  ನಿರ್ವಹಿಸುತ್ತಾರೆ 

       ಶಿಕ್ಷಕನಿಗೂ ವಿದ್ಯಾರ್ಥಿಗೂ ಅವಿನಾಭಾವ ಸಂಬಂಧವಿದೆ. ಮಗು ಮೊದಲು ಶಾಲೆಗೆ ಹೋದಾಗ ಶಿಕ್ಷಕ ಹೇಳಿದ್ದನೆಲ್ಲ ನಂಬುತ್ತದೆ. ಮಗುವಿಗೆ ಶಿಕ್ಷಕರೇ ಮೊದಲ ಆದರ್ಶ. ಇಂಥ ಸ್ಥಿತಿಯಲ್ಲಿ ಶಿಕ್ಷಕನ ಜವಾಬ್ದಾರಿ ನಿಜವಾಗಿಯೂ ಮಹತ್ವದ್ದಾಗಿರುತ್ತದೆ. ಹಸಿ ಮಣ್ಣಿನ ಮುದ್ದೆಯಂತೆ ಇರುವ ಮಗುವಿನ ಮನಸ್ಸನ್ನು ತಿದ್ದಿ ತೀಡಿ ಆರೋಗ್ಯ ಪೂರ್ಣ ಪ್ರಜೆಯನ್ನು ರೂಪಿಸುವ ಜವಾಬ್ದಾರಿ ಗುರುವಿನದು.


       ಗುರು ಎಂದರೆ  ಒಂದು ಶಕ್ತಿ ಅಜ್ಞಾನದ ಕತ್ತಲೆಯ ಕಳೆದು ಸುಜ್ಞಾನದ ಬೆಳಕಿನ  ಕರೆದುಕೊಂಡು ಹೋಗುವ ಮಾರ್ಗದರ್ಶಕ . ಎಲ್ಲಾ ಶಿಕ್ಷಕರಿಗೂ ಶಿಕ್ಷಕರ ದಿನಾಚರಣೆಯ ಶುಭಾಶಯಗಳು .


ನಿಮ್ಮ ಅನಿಸಿಕೆಗಳನ್ನು ಕಮೆಂಟಿನಲ್ಲಿ ನಮೂದಿಸಿ

ಧನ್ಯವಾದಗಳು




No comments:

Post a Comment