ಪರಿಸರದ ಸಂರಕ್ಷಣೆ

ಪರಿಸರ ಎಂದರೆ ನಮ್ಮ ಸುತ್ತಮುತ್ತಲು ಇರುವ ವಾತಾವರಣ ಉದಾಹರಣೆಗೆ  ಕಾಡು, ಗುಡ್ಡಬೆಟ್ಟಗಳು, ಭೂಮಿ, ಆಕಾಶ, ಪಶು ಪಕ್ಷಿಗು ಇತ್ಯಾದಿ.  ಮಾನವನೂ ಸಹ ಇದೆ ಪರಿಸರದ ಒಂದು ಭಾಗ. ಇನ್ನು ಪರಿಸರ ಮಾಲಿನ್ಯ ಎಂದರೆ ಅಪಾಯಕಾರಿ ಹಾಗೂ ವಿಷಕಾರಕವಾದ ವಸ್ತುಗಳು ಪರಿಸರಕ್ಕೆ ಸೇರುವುದು. ಈ ವಸ್ತುಗಳು ಭೂಮಿಯ ಮೇಲಿನ ಎಲ್ಲ ಜೀವಿಗಳ ಮೇಲೂ ದುಷ್ಪರಿಣಾಮ ಉಂಟು ಮಾಡುತ್ತವೆ ಹಾಗೂ ನೈಸರ್ಗಿಕವಾಗಿ ನಡೆಯುವ ಜೈವಿಕ ಚಕ್ರದ ಮೇಲೂ ಪರಿಣಾಮ ಉಂಟು ಮಾಡುತ್ತದೆ. ಪರಿಸರ ಮಾಲಿನ್ಯಕ್ಕೆ ನೈಸರ್ಗಿಕ ಕಾರಣಗಳೂ ಇವೆ ಮತ್ತು ಮಾನವ ನಿರ್ಮಿತ ಕಾರಣಗಳೂ ಇವೆ.   

ಮಾನವ  ಪ್ರತಿಯೊಂದಕ್ಕೂ ಪ್ರಕೃತಿಯನ್ನೇ ಅವಲಂಬಿಸಿದ್ದಾನೆ. ನಾವು ನಮ್ಮ ದಿನನಿತ್ಯದ ಅಗತ್ಯಗಳಾದ ಆಹಾರ, ಬಟ್ಟೆ, ಗಾಳಿ, ಬೆಳಕು, ಔಷಧ ಮುಂತಾದ ಜೀವನಾವಶ್ಯಕ ಸಕಲ ಸೌಕರ್ಯಗಳಿಗೂ ಪ್ರಕೃತಿಯೇ ಜೀವನಾಧಾರವಾಗಿದೆ. ಮಾನವರಾದ ನಾವು ನಮ್ಮ ಅಜ್ಞಾನ, ದುರಾಸೆ, ದುಂದುಗಾರಿಕೆ ಹಾಗೂ ಮೋಜುಮಸ್ತಿಗಳಿಗಾಗಿ ಇಂತಹ ಅಮೂಲ್ಯವಾದ ಪರಿಸರವನ್ನು ನಾಶ ಮಾಡಿದರೆ ಅಸಮತೋಲನ ಉಂಟಾಗುತ್ತದೆ. ಆದ್ದರಿಂದ ಈ ಸುಂದರ ಪರಿಸರದ ಸಂರಕ್ಷಣೆಯ ಜವಾಬ್ದಾರಿ ನಮ್ಮ ಮೇಲಿದೆ

  1. ಆಧುನಿಕ ಕೈಗಾರಿಕಾ ಸ್ಥಾವರದ ರಚನಾ ವಿನ್ಯಾಸದಲ್ಲಿ ಕಶ್ಮಲ ಕಳೆಯುವುದು ತುಂಬ ಮುಖ್ಯವಾದುದು. ಘನಪದಾರ್ಥಗಳಲ್ಲಿ ತೇಲುವಂಥವು, ಯಾಂತ್ರಿಕವಾಗಿ ಪ್ರತ್ಯೇಕಿಸಬೇಕು, ಮುಳುಗುವಂಥದನ್ನು ವಿಶಿಷ್ಟ ಕೋಶಗಳಲ್ಲಿ ಕೆಳಗಿಳಿಸಿ ಬೇರ್ಪಡಿಸಬೇಕು. ಕೈಗಾರಿಕಾ ಕಶ್ಮಲದ ದುಷ್ಪರಿಣಾಮಗಳ ಬಗ್ಗೆ ವಿಶೇಷ ಗಮನ ಕೊಡುವುದು ಅಗತ್ಯ
  2. ಅರಣ್ಯಗಳು ಜನರ ಶ್ವಾಸಕೋಶಗಳು. ಇವುಗಳು ಊನವಾದರೆ ಜನರ ಜೀವನ ದುಸ್ಸಾಹಸವೇ ಸರಿ. ಆದುದರಿಂದ ಅವುಗಳ ರಕ್ಷಣೆ ಪ್ರತಿಯೊಬ್ಬನ ಆದ್ಯ ಕರ್ತವ್ಯವಾಗಿದೆ. ಅರಣ್ಯನಾಶವನ್ನು ತಡೆಗಟ್ಟಬೇಕು
  3. ವನಮಹೋತ್ಸವದ ಮೂಲಕ ಹೆಚ್ಚು ಹೆಚ್ಚು ಗಿಡಗಳನ್ನು ನೆಡಬೇಕು. ಅರಣ್ಯ ರಕ್ಷಣೆ ಮಾಡಿ ಇಡೀ ಜಗತ್ತನ್ನು ಅಪಾಯದಿಂದ ಮಾಡಬೇಕಾದ ಜವಾಬ್ದಾರಿ ನಮ್ಮ ಕೈಯಲ್ಲಿದೆ. ಇದಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು.
  4. ನಮಗೆ ನೀರು ದೊರೆಯುವ ಮೂಲಗಳನ್ನು ಸೂಕ್ತ ರೀತಿಯಲ್ಲಿ ಸಂರಕ್ಷಿಸಬೇಕು. ಕೆರೆ ಕಟ್ಟೆಗಳಲ್ಲಿನ ನೀರನ್ನು ಕೊಳಕು ಮಾಡಬಾರದು. ಬಾವಿಯನ್ನು ಸುತ್ತಲೂ ಕಟ್ಟೆ ಕಟ್ಟುವುದರ ಮೂಲಕ ರಕ್ಷಿಸಬೇಕು. ಆದಷ್ಟು ಕೊಳವೆ ಬಾವಿಯನ್ನು ತೋಡಿಸಬೇಕು. ಕುಡಿಯುವ ನೀರನ್ನು ಶುದ್ಧವಾಗಿಡುವುದು ಇಡೀ ಸಮುದಾಯದ ಜವಾಬ್ದಾರಿ.
  5. ನಮ್ಮ ಮನೆಯ  ಸುತ್ತಮುತ್ತಲಿನ ಜಾಗವನ್ನು ಸ್ವಚ್ಚವಾಗಿ ಇಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಮನೆಯ ಹಿಂದೆ ಮುಂದೆ ಜಾಗವಿದ್ದರೆ ಕೈ ತೋಟ ಮಾಡುವುದುಉತ್ತಮ. ಸೂಕ್ತ ರೀತಿಯಲ್ಲಿ ಗೊಬ್ಬರದ ಗುಂಡಿಗಳನ್ನು ನಿರ್ಮಿಸಿ ಸಗಣಿ ಮತ್ತು ಇತರ ಅನುಪಯುಕ್ತ ವಸ್ತುಗಳನ್ನು ಅದರಲ್ಲಿ ಹಾಕಬೇಕು.
  6. ಶೌಚಾಲಯಗಳ ಪಾತ್ರ ಅತಿ ಮುಖ್ಯ. ನೈರ್ಮಲ್ಯದಿಂದ ಕೂಡಿದ ಶೌಚಗೃಹಗಳಿಂದ ಅನೇಕ ರೋಗ ರುಜಿನಗಳು ಹರಡುವುದನ್ನು ತಡೆಗಟ್ಟಬಹುದು.

ಮ್ಮ ಭೂಮಿ ಮುಂದಿನ ಪೀಳಿಗೆಗೆ ಹಸಿರು ಕಾಡುಗಳನ್ನು, ಶುದ್ಧವಾದ ಗಾಳಿ, ನೀರನ್ನು ಹೊಂದಿರಬೇಕೆಂದರೆ ನಾವು ನಮ್ಮ ಪರಿಸರವನ್ನು ರಕ್ಷಿಸಿ ಕೊಳ್ಳಬೇಕು. ಈಗಲೇ ನಾವು ಎಚ್ಚೆತ್ತುಕೊಂಡು ನಮ್ಮ ಸುತ್ತ ಮುತ್ತಲಿನವರಲ್ಲೂ ಜಾಗೃತಿ ಮೂಡಿಸುವುದು ಅನಿವಾರ್ಯ. ನಮ್ಮ ನಡಿಗೆ ಸ್ವಚ್ಛ ಪರಿಸರದೆಡೆಗೆ ಇರಬೇಕು.

 

No comments:

Post a Comment